ಜೈನಮುನಿ ಹತ್ಯೆ ಪ್ರಕರಣ: ಗದ್ದೆಯ ಕೊಳವೆಬಾವಿಯಲ್ಲಿ ಮೃತದೇಹ ಪತ್ತೆ!

0

ಬೆಳಗಾವಿನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ.

ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದೆ. ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ.

ಬೆಳಗ್ಗೆಯಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ್ದು ಸತತ ಒಂಬತ್ತು ಗಂಟೆಗಳ ಕಾಲ ಬಳಿಕ ಜೈನಮುನಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಿಕ್ಕ ಬೆನ್ನಲ್ಲೇ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed