ಪ್ರಿನ್ಸಿಪಾಲ್ ಬೈದ್ರು ಅಂತ ವಿದ್ಯಾರ್ಥಿ ನೇಣಿಗೆ ಶರಣು
ಬೆಂಗಳೂರು: ಪ್ರಿನ್ಸಿಪಾಲ್ ಬೈದದ್ದರಿಂದ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿಯಲ್ಲಿ ನಡೆದಿದೆ. ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್ ಅಲಿಯಾಸ್ ಜೈದ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಲ್ಎಲ್ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್, ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ. ನಿನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೂ ಪ್ರಕರಣ ಸಂಬಂಧ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ..