ಸಿದ್ದರಾಮಯ್ಯಯವರಿಗೆ ಬಾದಾಮಿ ಕ್ಷೇತ್ರದಿಂದ ಗೆದ್ದು ಬರುವ ವಿಶ್ವಾಸ ವಿಲ್ಲ

0

ಬೆಂಗಳೂರು: ಕೋಲಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಿಂದ ಗೆದ್ದು ಬರುವ ವಿಶ್ವಾಸ ಇಲ್ಲ, ಒಂದು ವೇಳೆ ಇದ್ದಿದ್ದರೆ ಬಾದಾಮಿ, ಚಾಮುಂಡೇಶ್ವರಿಯಲ್ಲಿ ನಿಂತು ಗೆಲ್ಲುತ್ತಿದ್ದರು. ಆದರೆ ಎರಡು ಕೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲವೆಂದಿ ಈ ಬಾರಿ ಕೋಲಾರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾಲ್ಕು ದಶಕಗಳ ರಾಜಕಾರಣದಲ್ಲಿ ಸ್ವಜಿಲ್ಲೆ ಮೈಸೂರಿನಲ್ಲಿ ನಿಂತು ಗೆದ್ದಿಲ್ಲ. ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.ಈ ಸವಾಲನ್ನು ನಾನು ಸ್ವೀಕರ ಮಾಡುತ್ತೇನೆ ಎಂದು ಹೇಳುವುದಿಲ್ಲ, ಕೋಲಾರ ಕ್ಷೇತ್ರದ ಜನರು ಈ ಸವಾಲನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ಚುನಾವಣೆ ಸಿದ್ದರಾಮಯ್ಯ ನೀತಿಯ ನಡುವಿನ ಹೋರಾಟವೇ ಹೊರತು ವ್ಯಕ್ತಿಗತವಾಗಿ ಸಿದ್ದರಾಮಯ್ಯ ಅವರ ನಡುವಿನ ಹೋರಾಟವಲ್ಲ ಎಂದು ಕಿಡಿಕಾರಿದ್ದಾರೆ.

About Author

Leave a Reply

Your email address will not be published. Required fields are marked *

You may have missed