ಕಿಚ್ಚನಿಗೆ ವಿಶೇಷ ಉಡುಗೊರೆ ನೀಡಿದ ಅರ್ಜುನ್ ಜನ್ಯ
ಅರ್ಜುನ್ ಜನ್ಯ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ನಿರ್ದೇಶನಕ್ಕೂ ಕೈ ಹಾಕ್ತಿದ್ದಾರೆ. ಇದರ ನಡುವೆ ಕಿಚ್ಚ ಸುದೀಪ್ ಅವರನ್ನ ಅರ್ಜುನ್ ಜನ್ಯ ಭೇಟಿಯಾಗಿ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ.
`ಕೆಂಪೇಗೌಡ’ (Kempegowda) ಸಿನಿಮಾಗೆ ಮ್ಯೂಸಿಕ್ ಕಂಪೋಸ್ ಮಾಡಿದ ಮೇಲೆ ಅರ್ಜುನ್ ಜನ್ಯ ಅವರ ಲಕ್ ಚೇಂಜ್ ಆಯ್ತು. ಈ ಸಿನಿಮಾಗೆ ಮ್ಯೂಸಿಕ್ ಕಂಪೋಸ್ ಮಾಡಲು ಅವಕಾಶ ಕೊಟ್ಟಿದ್ದೆ ಸುದೀಪ್, ಹಾಗಾಗಿ ತನ್ನ ಪಾಲಿನ ಗಾಡ್ ಫಾದರ್ ಎಂದು ಜನ್ಯ ಸಾಕಷ್ಟು ಬಾರಿ ಹೇಳಿದ್ದಾರೆ.
ಇದೀಗ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಿಚ್ಚನಿಗೆ ಬಾಸ್ ಹೆಸರಿನ ಜರ್ಸಿಯೊಂದನ್ನ ಅರ್ಜುನ್ ಜನ್ಯ ಉಡುಗೊರೆಯಾಗಿ ನೀಡಿದ್ದಾರೆ.