ಮ್ಯಾಟ್ರಿಮೋನಿ ಸಿಬ್ಬಂದಿ ವಿರುದ್ಧ ದಾಖಲಾದ ಪ್ರಕರಣ ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠವು ಯುವತಿಗೆ ವಂಚನೆ ಮಾಡಿದ ಆರೋಪದ ಮೇಲೆ ಮ್ಯಾಟ್ರಿಮೋನಿ ಸಿಬ್ಬಂದಿ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಪಡಿಸಿದೆ. ತಮ್ಮ ವಿರುದ್ದ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡುವಂತೆ ಕೋರಿ ಕನ್ನಡ ಮ್ಯಾಟ್ರಿಮನಿ ಸಂಸ್ಥೆಯ ಸಿಬ್ಬಂದಿಯಾದ ವಿಜಯ್ ಕುಮಾರ್ ಮತ್ತು ಚಂದ್ರಶೇಖರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯಪೀಠ, ಈ ಆದೇಶ ನೀಡಿದೆ.
ದಾಖಲೆ ಮತ್ತು ಅರ್ಜಿದಾರರ ವಾದವನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಆರೋಪವಿರುವುದು ಉತ್ತಮ ವರ ಹುಡುಕಿಕೊಡುವುದಾಗಿ ಹೆಸರು ನೋಂದಣಿಗೆ 3700 ರೂಪಾಯಿಗಳನ್ನು ಪಡೆದಿರುವುದಾಗಿದೆ. ಆದರೆ ಅವರು ಆ ಕೆಲಸ ಮಾಡದೆ ವಂಚನೆ ಎಸಗಿದ್ದಾರೆ ಎಂಬುದಾಗಿದೆ. ಆದರೆ ವಂಚಿಸುವ ಉದ್ದೇಶ ವೆಬ್ಸೈಟ್ ಸಿಬ್ಬಂದಿಗಿತ್ತು ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ. ಹಾಗಾಗಿ ಮ್ಯಾಟ್ರಿಮೋನಿ ಸಿಬ್ಬಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.