ಈ ಬಾರಿ ರಾಜ್ಯದಲ್ಲಿ ನಮ್ಮ ಪಕ್ಷದ ಪರವಾದ ಗಾಳಿ ಬೀಸುತ್ತಿದೆ: ಶಾಸಕ ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ ಒಳಜಗಳವೇ ನಮಗೆ ವರದಾನ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಸರ್ಕಾರದಲ್ಲಿ ಎರಡೂವರೆ ವರ್ಷ ಯಾವುದೇ ಅನುದಾನ ನೀಡಿಲ್ಲ. ಬೆಂಗಳೂರಿನ ಪರಿಸ್ಥಿತಿಯೇ ಹಾಳಾಗಿದ್ದು, ಅನುದಾನ ವಿಚಾರದಲ್ಲಿ ವಿರೋಧ ಪಕ್ಷದ ಶಾಸರನ್ನ ಸರ್ಕಾರ ಕಡೆಗಣಿಸಿದೆ.
ಅಭಿವೃದ್ದ ಹೆಸರಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ ಹೀಗಾಗಿ ಜನರಿಗೆ ಉತ್ತಮ ಆಡಳಿತ ನೀಡಬೇಕು ಅಂತ ನಾವು ಪಕ್ಷವನ್ನ ಅಧಿಕಾರಕ್ಕೆ ತರ್ಬೇಕು ಹಾಗೂ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡ್ಬೇಕು ಅಂತ ನಾವು ಪಕ್ಷ ಸಂಘಟಿಸಲು ಕಾರ್ಯತಂತ್ರ ರೂಪಿಸುತ್ತಿದ್ದೇನೆ ಎಂದರು. ಇನ್ನೂ ಪ್ರಜಾಧ್ವನಿ ಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರವಾಸವನ್ನ ಕೈಗೊಂಡಿದ್ದೇವೆ.