ನನ್ನ ಹತ್ಯೆಗೆ ಸುಫಾರಿ ಕೊಟ್ಟಿರುವವರ ಹಿಂದೆ ರಾಜಕೀಯ ದುರುದ್ದೇಶವೇ ಇದೆ: ಶಾಸಕ ಎಂ ಸತೀಶ್ ರೆಡ್ಡಿ
ಬೆಂಗಳೂರು: ನನ್ನ ಹತ್ಯೆಗೆ ಸುಫಾರಿ ಕೊಟ್ಟಿರುವವರ ಹಿಂದೆ ರಾಜಕೀಯ ದುರುದ್ದೇಶವೇ ಇದೆ ಎಂದು ಶಾಸಕ ಎಂ ಸತೀಶ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸುಪಾರಿ ಹಿಂದೆ ರಾಜಕೀಯ ದುರುದ್ದೇಶವೇ ಇದೆ. ನಾನು ಯಾರಿಗೂ ದ್ರೋಹ ಮಾಡಿಲ್ಲ.
ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ, ಸುಪಾರಿ ಬಗ್ಗೆ ಮಾತಾಡಿರುವವರ ಆಡಿಯೋ ಪೊಲೀಸರಿಗೆ ಸಿಕ್ಕಿದೆ. ಅಲ್ಲದೇ, ನಾನು ಯಾರ ಮೇಲೆಯೂ ಆರೋಪ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ಆದರೆ, ಪಾರದರ್ಶಕ ತನಿಖೆ ಆಗಲಿ ಎಂದು ಆಗ್ರಹಿಸಿದರು. ನನಗೆ ನಿನ್ನೆ ಸಂಜೆ ಪೊಲೀಸರು ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಇದರ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ.
ಆಗ ಸಿಎಂ ಭದ್ರತೆ ತೆಗೆದುಕೊಳ್ಳುವಂತ ಹೇಳಿದರು. ಆದರೆ, ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ” ಎಂದರು. ನಾನು ಭಯ ಪಡುವುದಿಲ್ಲ. ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆರೋಪಿಗಳು ನನ್ನ ಚಲನವಲನದ ಮೇಲೆ ಗಮನ ಇಟ್ಟಿದ್ದರಂತೆ, ಆರೋಪಿಗಳು ಎಲ್ಲೆಲ್ಲಿ ಓಡಾಡಿದ್ದಾರೆ. ಏನೇನು ಮಾಡಿದ್ದಾರೆ ಎಂಬುದನ್ನು ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ಭಯ ಪಡುವವನಲ್ಲ. ಇದಕ್ಕೆಲ್ಲ ಹೆದರಲ್ಲ. ನಾನು ಪೂರ್ತಿ ರಾಜಕಾರಣದಲ್ಲೇ ಇದ್ದೇನೆ. ಈಗ ಯಾವುದೇ ಉದ್ಯಮದಲ್ಲಿ ನಾನು ಇಲ್ಲ. ಉದ್ಯಮ ಕಾರಣ ಸುಪಾರಿ ಹಿಂದೆ ಇಲ್ಲ. ರಾಜಕೀಯ ಕಾರಣವೇ ಸುಪಾರಿ ಹಿಂದೆ ಇದೆ. ಪೊಲೀಸರು ತನಿಖೆ ಮಾಡಿ ಅಪರಾಧಿಗಳನ್ನು ಜೈಲಿಗೆ ಕಳಿಸಲಿ” ಎಂದು ಒತ್ತಾಯಿಸಿದರು.