ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್
ನವದೆಹಲಿ: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ಮನೀಶ್ ಸಿಸೋಡಿಯಾ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿದ್ದಾರೆ.
ಇದೀಗ ಇಬ್ಬರೂ ಸಚಿವರು ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು,
ಇಬ್ಬರ ರಾಜಿನಾಮೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿಯಿಂದ ನಿರಂತರ ಬೇಡಿಕೆ ಇತ್ತು. ಏತನ್ಮಧ್ಯೆ, ದೆಹಲಿ ಸರ್ಕಾರದಲ್ಲಿ ಈ ದೊಡ್ಡ ಪುನಾರಚನೆ ನಡೆದಿದ್ದು, ಮಾಹಿತಿ ಪ್ರಕಾರ ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ನೀಡುವ ಸಾಧ್ಯತೆ ಇದೆ.