ರಾಜ್ಯದಿಂದ ಗೋವಾಕ್ಕೆ ಗೋಮಾಂಸ ಸಾಗಣೆ ಮಾಡುತ್ತಿದ್ದರೆ ಕ್ರಮ: ಸಚಿವ ಪ್ರಭು ಚವ್ಹಾಣ್
ಬೆಂಗಳೂರು: ರಾಜ್ಯದಿಂದ ಗೋವಾಕ್ಕೆ ಗೋಮಾಂಸ ಸಾಗಣೆ ಮಾಡುತ್ತಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ದನದ ಮಾಂಸ ಸಾಗಾಣಿಕೆ ಅಕ್ರಮವಾಗಲಿದೆ.
ಎಲ್ಲಿಯೂ ಸಾಗಾಣಿಕೆ ಮಾಡುತ್ತಿಲ್ಲ,
ಒಂದು ವೇಳೆ ಗೋವಾಕ್ಕೆ ನಮ್ಮ ರಾಜ್ಯದಿಂದ ದನದ ಮಾಂಸ ಸಾಗಣೆ ಮಾಡುತ್ತಿರುವುದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಚರ್ಮಗಂಟು ರೋಗಕ್ಕೆ ಈಗಾಗಲೇ 1 ಕೋಟಗೂ ಅಧಿಕ ಲಸಿಕೆ ಹಾಕಲಾಗಿದೆ. ಬೇರೆ ರಾಜ್ಯದಲ್ಲಿ ಪರಿಹಾರ ಕೊಡುತ್ತಿಲ್ಲ. ಆದರೆ, ನಾವು ಪರಿಹಾರ ಕೊಡುತ್ತಿದ್ದೇವೆ. ರೋಗ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸಿದೆ ಎಂದು ಸಚಿವರು ಹೇಳಿದ್ದಾರೆ.