ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಗೆ ಜೀವ ಬೆದರಿಕೆ; ಪ್ರಿಯಾಂಕಾ ಗಾಂಧಿ ಆಪ್ತನ ವಿರುದ್ಧ FIR

0

ಮೀರತ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್ ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಈ ಗಂಭೀರ ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್‍ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೇಸ್‍ಬುಕ್ ಲೈವ್‍ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿರುವ ಅವರು ಪ್ರಿಯಾಂಕಾ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 26 ರಂದು ಛತ್ತೀಸ್‍ಗಢದ ರಾಯ್‍ಪುರಕ್ಕೆ ತಮ್ಮ ಪುತ್ರಿ ಅರ್ಚನಾ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿಸುವಂತೆ ಅವರ ಆಪ್ತ ಸಹಾಯಕರನ್ನು ಕೇಳಿಕೊಂಡಿದ್ದರು. ಆದರೆ, ಆಕೆಯನ್ನು ಪ್ರಿಯಾಂಕಾ ಗಾಂಧಿಗೆ ಪರಿಚಯಿಸಲು ನಿರಾಕರಿಸಿದ್ದ ಆತ, ಜಾತಿವಾದಿ ಪದಗಳು ಹಾಗೂ ಅವಾಚ್ಯ ಶಬ್ಧಗಳನ್ನು ಬಳಸಿ ಅರ್ಚನಾ ಜತೆ ಅಸಭ್ಯವಾಗಿ ಮಾತನಾಡಿದ್ದಾನೆ.ಇದಲ್ಲದೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರ್ಚನಾ ತಂದೆ ಗೌತಮ್ ಬುದ್ಧ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed