ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಟ್ವೀಟ್: ಪ್ರಶಾಂತ್ ಸಂಬರಗಿ ವಿರುದ್ಧ ಜೆಡಿಎಸ್ ದೂರು
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಟ್ವೀಟ್ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ವಿರುದ್ಧ ಜೆಡಿಎಸ್ ದೂರು ನೀಡಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ.
ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಅವರು,
ಮಾಜಿ ಪ್ರಧಾನಿ ದೇವೇಗೌಡರು & ಕುಮಾರಸ್ವಾಮಿ ಬಗ್ಗೆ ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾವಿ ಬರೆದುಕೊಂಡಿದ್ದರು. ಈ ಹಿನ್ನೆಲೆ ಸಂಬರಗಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ಘಟಕದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರಿಂದ ದೂರು ಸಲ್ಲಿಕೆ ಮಾಡಿದ್ದಾರೆ. ಇನ್ನೂ ದೂರು ಸ್ವೀಕರಿಸಿದ, ಡಿಸಿಪಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಒಂದು ವೇಳೆ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎ.ಪಿ.ರಂಗನಾಥ್ ಈ ವೇಳೆ ಎಚ್ಚರಿಕೆ ನೀಡಿದ್ದಾರೆ.