ಸಿದ್ದುಗೆ ತಟ್ಟಿದ ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ
ಬೆಂಗಳೂರು : ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಚುನಾವಣಾ ನೀತಿ ಸಂಹಿತೆ ಬಿಸಿ ತಟಿದ್ದು, ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಎಲೆಕ್ಷನ್ಗೆ ಡೇಟ್ ಫಿಕ್ಸ್ ಆದ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಚುನಾವಣಾ ಪ್ರಚಾರಕ್ಕಾಗಿ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ನಿಟ್ಟಿನಲ್ಲಿ ಇದೀಗ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ವರುಣಾ ಮತ ಪ್ರಚಾರಕ್ಕೆ ಪ್ರಯಾಣ ಬೆಳೆಸಿದ್ದಾರೆ