ರಾಜಕಾರಣಕ್ಕೆ ಎಂಟ್ರಿ ಕೊಡ್ತಾರೆ ನಿರ್ಮಾಪಕ ಕೆ.ಮಂಜು
ಬೆಂಗಳೂರು: ನಿರ್ಮಾಪಕ ಕೆ. ಮಂಜು ಅವರು ರಾಜಕಾರಣಕ್ಕೆ ಎಂಟ್ರಿ ನೀಡುವ ಸೂಚನೆ ಸಿಕ್ಕಿದ್ದು, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತಯಾಗಿ ಘೋಷಣೆ ಮಾಡಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿ ಕೆ.
ಮಂಜು ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಈಗ ಅವರು ರಾಜಕೀಯದ ಕಡೆಗೆ ಆಸಕ್ತಿ ತೋರಿಸುತ್ತಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಚರ್ಚಿಸಲು ಅವರು ಶೀಘದಲ್ಲೇ ಕೆಲವು ರಾಜಕೀಯ ಮುಖಂಡರ ಜೊತೆ ಮಾತುಕತೆ ನಡೆಯಲಿದ್ದಾರೆ. ನಮ್ಮ ಕೆಲವು ನಾಯಕರನ್ನ ಭೇಟಿ ಮಾಡುತ್ತೇನೆ. ಶೀಘ್ರದಲ್ಲೇ ಎಲ್ಲವೂ ಫೈನಲ್ ಆಗುತ್ತದೆ. ಪದ್ಮನಾಭ ನಗರದಲ್ಲಿ ಒಕ್ಕಲಿಗರ ಮತಗಳು ಜಾಸ್ತಿ ಇವೆ. ನನಗೆ ಹಲವು ನಾಯಕರ ಬೆಂಬಲ ಸಿಗುವ ಸಾಧ್ಯತೆ ಇದೆ. ಹೀಗಾಗಿ ಹಿರಿಯರ ಆಶೀರ್ವಾದ ಪಡೆದು ಚುನಾವಣೆಗೆ ಸ್ಪರ್ಧಿಸುತ್ತೇನೆ. ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ’ ಎಂದು ಕೆ. ಮಂಜು ಹೇಳಿದ್ದಾರೆ.