ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರುತ್ತಾರಾ ಮಾಜಿ ಸಿಎಂ ಶೆಟ್ಟರ್..?

0

ಬೆಂಗಳೂರುಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್​ ಬಿಜೆಪಿಗೆ ರಾಜಿನಾಮೆ ನೀಡಲು ಘೋಷಿಸಿದ್ದು, ಕಾಂಗ್ರೆಸ್​ ಸೇರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಈಗಾಗಲೆ ರಾಜ್ಯ ಕಾಂಗ್ರೆಸ್​ ನಾಯಕರು ಜಗದೀಶ್​ ಶೆಟ್ಟರ್​​ ಅವರನ್ನು ಸಂಪರ್ಕಿಸಿದ್ದು, ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ಗೆ ಸೇರುವುದು ಪಕ್ಕಾ ಆದಲ್ಲಿ ರೆಡ್​ ಕಾರ್ಪೆಟ್​ ಹಾಕಿ, ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರ ಸಮ್ಮುಖದಲ್ಲಿ ಸೇರುವ ಸಾಧ್ಯತೆ ಇದೆ.

ಟಿಕೆಟ್​ ಸಿಗದ ಹಿನ್ನೆಲೆ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಇಂದು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳಸಿದ್ದಾರೆ. ಪ್ರಯಾಣದಲ್ಲಿ ಧಾರವಾಡ ಜಿಲ್ಲೆಯ ಕಾಂಗ್ರೆಸ್​ ಮುಖಂಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆಪ್ತ ಜೊತೆಯಾಗಿದ್ದು ಕುತೂಹಲ ಮೂಡಿಸಿದೆ.

About Author

Leave a Reply

Your email address will not be published. Required fields are marked *

You may have missed