ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಲವಾದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಪರಿಗಣಿಸಲಾಗದು: ಹೈಕೋರ್ಟ್
ಬೆಂಗಳೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇಲ್ಲದೇ ಹೋದಲ್ಲಿ ಅಂತಹ ಪ್ರಕರಣವನ್ನು ಪರಿಗಣಿಸ ಲಾಗದು ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯ ಆದೇಶವನ್ನು ಮಾರ್ಪಾಡು ಮಾಡಿ ಆದೇಶಿಸಿದೆ.
ಜತೆಗೆ, ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕೆಯನ್ನು ರದ್ದುಪಡಿಸಿದೆ.
ಆದರೆ, ಮಾನಸಿಕ ಕಿರುಕುಳ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಅಲ್ಲದೆ, ಐಪಿಸಿ ಸೆಕ್ಷನ್ 306 ಪ್ರಕರಣದಲ್ಲಿ ಅಪರಾಧಿ ಮೃತರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಕುಮ್ಮಕ್ಕು ನೀಡಿರುವುದಕ್ಕೆ ಬಲವಾದ ಸಾಕ್ಷ್ಯಾಧಾರಗಳಿರಬೇಕು. ಇದಕ್ಕೆ ನಿಖರವಾದ ಪುರಾವೆಗಳಿರಬೇಕು. ಅಲ್ಲದೆ, ಸತತ ಪ್ರಚೋದನೆ ನೀಡಿರುವ ಪರಿಣಾಮ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪುವಂತಿರಬೇಕು. ಇಲ್ಲವಾದಲ್ಲಿ ಆರೋಪವನ್ನು ಪರಿಗಣಿಸಲಾಗದು ಎಂದು ತಿಳಿಸಿದ ನ್ಯಾಯಪೀಠ ಶಿಕ್ಷೆಯನ್ನು ರದ್ದುಪಡಿಸಿದೆ.