ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ: ಕೆ.ಸುಧಾಕರ್
ಚಿಕ್ಕಬಳ್ಳಾಪುರ: ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ (Sudhakar) ತಿಳಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಟ್ರೆ ನಾನು ಸಹ ಅದೇ ರಕ್ತದಲ್ಲಿ ಬರೆದು ಕೊಡುತ್ತೇನೆ.
ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲ್ಲ. ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿ ಆಡಳಿತ ಮಾಡುತ್ತೇವೆ. ಕಾಂಗ್ರೆಸ್ ಮುಳುಗುವ ಹಡುಗು. ಹೀಗಾಗಿ ಡಿ.ಕೆ ಶಿವಕುಮಾರ್ ಸಹ ಬಿಜೆಪಿಗೆ ಬರುವ ದಿನಗಳು ದೂರ ಇಲ್ಲ ಎಂದು ಡಿ.ಕೆ. ಶಿವಕುಮಾರ್ (DK Shivakumar) ಹೇಳಿಕೆಗೆ ತಿರುಗೇಟು ನೀಡಿದರು.