ಮತದಾರರ ಮೇಲೆ ಪ್ರಭಾವ ಅಥವಾ ಬೆದರಿಕೆ ಹಾಕಿದರೆ ಕಟ್ಟುನಿಟ್ಟಿನ ಕ್ರಮ: ತುಷಾರ್ ಗಿರಿನಾಥ್

0

ಬೆಂಗಳೂರು: ಮತದಾರರ ಮೇಲೆ ಪ್ರಭಾವ ಅಥವಾ ಬೆದರಿಕೆ ಹಾಕಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮತದಾರರನ್ನು ಬೆದರಿಸಿ ರೌಡಿ ಚಟುಚಟಿಕೆ ನಡೆಸಿದರೆ ಹೆಡೆಮುರಿ ಕಟ್ಟಲಾಗುವುದು.

ಈಗಾಗಲೇ ಪೊಲೀಸರು ರೌಡಿಗಳ ಚಟುವಟಿಕೆಗಳನ್ನು ನಿಯಂತ್ರಣ ಮಾಡಲಾಗಿದೆ.

ಜೊತೆಗೆ, ಅತಿ ಸೂಕ್ಷ್ಮ ಮತಗಟ್ಟೆಗಳ ಮೇಲೆ ನಿಗಾ ಇಡಲಾಗಿದೆ. ಒಂದು ವೇಳೆ ಮತದಾರರ ಮೇಲೆ ಪ್ರಭಾವ ಅಥವಾ ಬೆದರಿಕೆ ಹಾಕಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ನಗರದಲ್ಲಿ ಶೇ.52ರಷ್ಟು ಮಾತ್ರ ಮತದಾನವಾಗುತ್ತಿದ್ದು, ಅದನ್ನು ಶೇ.75ಕ್ಕೆ ಹೆಚ್ಚಿಸಲು ಭಾರತ ಚುನಾವಣಾ ಆಯೋಗ, ಬಿಬಿಎಂಪಿ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇನ್ನೂ, ಯುವ ಮತದಾರರು ತಮ್ಮ ವಿವೇಚನೆ ಹಾಗೂ ಮಾನದಂಡದ ಪ್ರಕಾರ ಸರಿಯಾದ ಅಭ್ಯರ್ಥಿಗೆ ಮತದಾನ ಮಾಡಿ.

About Author

Leave a Reply

Your email address will not be published. Required fields are marked *

You may have missed