ಸಾಲಿನಲ್ಲಿ ನಿಂತು ಮತದಾನ ಮಾಡಿದ ಮಾಜಿ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕರ್ನಾಟಕ ವಿಧಾನಸಭೆ (Karnataka Assembly Election 2023) ಗೆ ಇಂದು ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಮನವಿ ಮಾಡಿಕೊಂಡಿದ್ದಾರೆ.
ಆರ್ಆರ್ ನಗರ (RR Nagar) ದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ವೋಟಿಂಗ್ ಕಡಿಮೆಯಾಗುವ ಬಗ್ಗೆ ಮಾಹಿತಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೆಚ್ಚು ಮತದಾನ ಆಗಬೇಕು ಎಂದು ಕರೆ ನೀಡಿದರು.