ನಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ: ನೂತನ ಶಾಸಕ ತಮ್ಮಯ್ಯ

0

ಬೆಂಗಳೂರು: ನಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ ಎಂದು ನೂತನ ಶಾಸಕ ಹೆಚ್​ಡಿ ತಮ್ಮಯ್ಯ(Tammaiya) ಹೇಳಿದ್ದಾರೆ. ಸದಾಶಿವ ನಗರದ ಡಿಕೆಶಿ ನಿವಾಸದ ಬಳಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ.

ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ. ಆ ಪ್ರಶ್ನೆಯೇ ಉದ್ಭವಿಸುದಿಲ್ಲ. ಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವಷ್ಟು ದೊಡ್ಡವನು ನಾನಲ್ಲ.

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು. ಸಿಟಿ ರವಿ ದುರಹಂಕಾರವೇ ಸೋಲಿಗೆ ಕಾರಣ ಎಂಬ ಹೆಚ್​. ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದು, ಗೆದ್ದ ಅಮಲಿನಲ್ಲಿ ಮಾತನಾಡುತ್ತಿದ್ದಾರೆ. ಆ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು. ಅವರು ನನ್ನ ಬಳಿಯೇ ಬಂದು ಸಹಿ ಮಾಡಿಸಿಕೊಂಡು ಹೋಗುತ್ತಿದ್ದರು. ನನ್ನ ಬಳಿ ಸಹಿ ಮಾಡಿಸಿಕೊಂಡು ಹೋಗುತ್ತಿದ್ದನ್ನು ಮರೆಯಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed