ಕಂಠೀರವ ಕ್ರೀಡಾಂಗಣ ಬಳಿ ನೂಕು ನುಗ್ಗಲು ಲಘು ಲಾಠಿ ಚಾರ್ಜ್ : ಮೂವರಿಗೆ ಗಾಯ

0

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಇಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ, ಸಾರ್ವಜನಿಕ ಪ್ರವೇಶ ದ್ವಾರದಲ್ಲಿ ಭಾರಿ ನೂಕು ನುಗ್ಗಲು ಸಂಭವಿಸಿದೆ. ನೂಕು ನುಗ್ಗಲು ತಡೆಯಲು, ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದು ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯಲ್ಲಿ ಓರ್ವ ಪೊಲೀಸ್ ಇನ್ಸ್​ಪೆಕ್ಟರ್​ಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಭದ್ರತಾ ವೈಫಲ್ಯವಾಯಿತೆ ಎಂಬ ಪ್ರಶ್ನೆ ಎದ್ದಿದೆ. ಲಕ್ಷಾಂತರ ಜನ ಸೇರುವ ಸಾರ್ವಜನಿಕ ಪ್ರವೇಶ ದ್ವಾರದಲ್ಲಿ ಬೆರಳೆಣಿಕೆಯಷ್ಟು ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಬ್ಯಾರಿಕೇಡ್ ಕೂಡ ಅಳವಡಿಸದ ಕಾರಣ ಪ್ರವೇಶ ದ್ವಾರದಲ್ಲಿ ನೂಕು ನುಗ್ಗಲು ಉಂಟಾಗಿದೆ‌. ಪರಿಣಾಮ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed