ಚುನಾವಣೆಯಲ್ಲಿ ಸೋಲು: JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ
ಬೆಂಗಳೂರು: ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ (CM Ibrahim) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ.
ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡ (HD Devegowda) ರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಹೊಸ ಸರ್ಕಾರ ಬಂದಿದೆ. ಅವರಿಗೆ ಶುಭವಾಗಲಿ.
ರಾಜ್ಯದಲ್ಲಿ ಬಿಜೆಪಿ (BJP) ಆಡಳಿತ ವಿರೋಧಿ ಇತ್ತು. ಇದನ್ನ ಕಾಂಗ್ರೆಸ್ (Congress) ಅವರು ಹಣದಿಂದ ಮತ್ತೊಂದು ಮಗದೊಂದು ವಿಚಾರದಲ್ಲಿ ಗೆದ್ದಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ, ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರೂ ನಾವು 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯ್ತಿ, ಲೋಕಸಭೆ ಚುನಾವಣೆ (Loksabha Election) ಗೆ ನಾವು ಸಿದ್ಧವಾಗಿ ಕೆಲಸ ಮಾಡ್ತೀವಿ. ಸಿಎಂಗೆ ಒಳ್ಳೆಯದಾಗಲಿ. ಕೊಟ್ಟ ಭರವಸೆ ಈಡೇರಿಸಲಿ. 3 ತಿಂಗಳು ಅವರಿಗೆ ಸಮಯ ಕೊಡ್ತೀವಿ. 3 ತಿಂಗಳು ಹನಿಮೂನ್ ಸಮಯ. ಜನರಿಗೆ