ಬೆಂಗಳೂರಿನ ಅಂಡರ್ ಪಾಸ್ ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ: ತುಷಾರ್ ಗಿರಿನಾಥ್
ಬೆಂಗಳೂರು: ಬೆಂಗಳೂರಿನ ಅಂಡರ್ಪಾಸ್ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್(Tushar Girinath) ಹೇಳಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, ಅಂಡರ್ಪಾಸ್ಗಳ ಸುರಕ್ಷತೆಯ ಕುರಿತಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಯಾವ ಅಂಡರ್ಪಾಸ್ಗಳೂ ಸದ್ಯಕ್ಕೆ ಮುಚ್ಚುವಂತ ಸ್ಥಿತಿಯಲ್ಲಿ ಇಲ್ಲ. ಕೆ.ಆರ್.ಸರ್ಕಲ್ ಹತ್ತಿರ ಕೆಲಸ ಶುರು ಮಾಡಿದ್ದೇವೆ. ಇತರೆ ಕಡೆಗಳಲ್ಲಿಯೂ ಅಗತ್ಯ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಸೈರನ್ ಅಳವಡಿಸುವ ಕ್ರಮದ ಕುರಿತು ಸರ್ಕಾರದಿಂದ ವರದಿ ಬರುವುದು ಬಾಕಿ ಇದೆ. ಸದ್ಯಕ್ಕೆ ಒಂದು ಸಿಸಿಟಿವಿ, ಲೈಟ್ಗಳು ಹಾಗೂ ಮ್ಯಾನುವಲ್ ಬ್ಯಾರಿಕೇಡ್ ಅಳವಡಿಸಿದ್ದೇವೆ. ಇವು ಎತ್ತರದಲ್ಲಿದ್ದು ಅಪಾಯ ತಪ್ಪಿಸಲಿವೆ. ಜೊತೆಗೆ, ಬೂಮ್ ಬ್ಯಾರಿಯರ್ ಅನ್ನು ಅಳವಡಿಸಲಾಗಿದೆ” ಎಂದು ಮಾಹಿತಿ ನೀಡಿದರು. ಅಂಡರ್ಪಾಸ್ಗಳ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಬಾರದು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂಡರ್ಪಾಸ್ ಕುರಿತು ಹೆಚ್ಚಿನ ಗಮನ ಹರಿಸಬೇಕು ಹಾಗೂ ಸುರಕ್ಷತೆ ಕಡೆ ಅಧಿಕಾರಿಗಳು ಗಮನ ಹರಿಸಬೇಕು” ಎಂದು ಹೇಳಿದ್ದಾರೆ.