ರಣಬೀರ್ ಬಳಿಕ ನಟಿ ಮಾಧುರಿ ದೀಕ್ಷಿತ್ ಮೇಲೆ ಗರಂ ಆದ ಉರ್ಫಿ

0

ದಾ ಚಿತ್ರ, ವಿಚಿತ್ರ ಬಟ್ಟೆಗಳನ್ನ ಧರಿಸಿ ಸುದ್ದಿಯಾಗುತ್ತಿದ್ದ ನಟಿ ಉರ್ಫಿ ಜಾವೇದ್ ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಟ ನಟಿಯರ ಮೇಲೆ ಗರಂ ಆಗ್ತಿದ್ದಾರೆ. ಮೊನ್ನೆಯಷ್ಟೇ ರಣಬೀರ್ ಕಪೂರ್ ಮೇಲೆ ಆರೋಪಗಳ ಸುರಿಮಳೆಗೈದಿದ್ದ ಉರ್ಫಿ ಇದೀಗ ಬಾಲಿವುಡ್ ಖ್ಯಾತ ನಟಿ ಮಾಧುರಿ ದೀಕ್ಷಿತ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಇದೇ ಸಮಯದಲ್ಲೇ ನಟಿ ಕಂಗನಾ ರಣಾವತ್ ಅವರನ್ನು ಹೊಗಳಿದ್ದಾರೆ.

ಕಾರ್ಯಕ್ರಮವೊಂದಕ್ಕೆ ಉರ್ಫಿ ಅತಿಥಿಯಾಗಿ ಹೋಗಬೇಕಿತ್ತಂತೆ. ಆದರೆ ಮಾಧುರಿ ದೀಕ್ಷಿತ್ ಕಾರಣದಿಂದಾಗಿ ಹೋಗಲು ಆಗಲಿಲ್ಲವಂತೆ. ತಮಗೆ ಇದರಿಂದಾಗಿ ಅವಮಾನ ಆಗಿದೆ ಎಂದು ಉರ್ಫಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ಬಗ್ಗೆ ಕಂಗನಾ ಆಗಾಗ್ಗೆ ಉರಿದು ಬೀಳುತ್ತಾರೆ. ಅವರು ಯಾಕೆ ಹಾಗೆ ಮಾಡುತ್ತಾರೆ ಎಂದು ನನಗೆ ಬೇಸರ ಅನಿಸುತ್ತಿತ್ತು. ಈಗೀಗ ನನಗೆ ಅರ್ಥವಾಗುತ್ತಿದೆ ಎಂದು ನಟಿ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಉರ್ಫಿ, ‘ಕಾರ್ಯಕ್ರಮವೊಂದರ ಆಯೋಜಕರು ನನಗೆ ಕರೆ ಮಾಡಿ, ಅತಿಥಿಯಾಗಿ ಬರಬೇಕು ಎಂದು ಹೇಳಿದ್ದರು. ನಾನು ಕೂಡ ಒಪ್ಪಿಕೊಂಡಿದ್ದೆ. ನಿಗದಿ ಕೆಲಸಗಳನ್ನು ಮುಂದಕ್ಕೆ ಹಾಕಿ ರೆಡಿಯಾದೆ. ಕಾರ್ಯಕ್ರಮದ ದಿನ ಆಯೋಜಕರು ಕರೆ ಮಾಡಿ, ನಿಮಗೆ ಆಹ್ವಾನವಿಲ್ಲ ಅಂದರು. ಕಾರಣ ಕೇಳಿದೆ. ಮಾಧುರಿ ಅವರ ಅತಿಥಿ ಲಿಸ್ಟ್ ನಲ್ಲಿ ನೀವು ಇಲ್ಲ ಅಂದರು’ ಎಂದು ಬರೆದುಕೊಂಡಿದ್ದಾರೆ.

ಮಾಧುರಿಗಿಂತ ನನಗೆ ಕಂಗನಾ ಗ್ರೇಟ್ ಅನಿಸುತ್ತಾರೆ. ಇಂತಹ ಅವಮಾನಗಳ ವಿರುದ‍್ಧ ಕಂಗನಾ ಧ್ವನಿ ಎತ್ತುತ್ತಲೇ ಇರುತ್ತಾರೆ. ಅವರು ಯಾಕೆ ಧ್ವನಿ ಎತ್ತುತ್ತಾರೆ ಎನ್ನುವುದು ಸ್ವಲ್ಪ ಸ್ವಲ್ಪ ನನಗೆ ಅರ್ಥವಾಗುತ್ತಿದೆ. ಕಂಗನಾ ಕಷ್ಟದ ಹಾದಿಯಲ್ಲಿ ಸಾಗಿ ಬಂದು ಸ್ಟಾರ್ ಆಗಿದ್ದಾರೆ ಎಂದು ಉರ್ಫಿ ಜಾವೇದ್ ಕಂಗನಾರನ್ನು ಹೊಗಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed