ರೈಲು ಅಪಘಾತ ಪ್ರಕರಣ: ಬಹನಾಗ ಬಜಾರ್​​ ಮಾರ್ಗದಲ್ಲಿ ರೈಲುಗಳ ಸಂಚಾರ ರದ್ದು

0

ಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ರೈಲುಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು ತೆರವು ಗೊಳಿಸಿ, ಹಳಿಗಳನ್ನು ಸರಿಪಡಿಸುವ ಕಾರ್ಯ ನಡೆಯಬೇಕಿದೆ.

 

ಅಲ್ಲಿಯವರೆಗೂ ಈ ಮಾರ್ಗದಲ್ಲಿ ರೈಲುಗಳ ಓಡಾಟ ಸಾಧ್ಯವಿಲ್ಲ. ಅಪಘಾತದ ಬಳಿಕ ಅನೇಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಾಗೆಯೇ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed