ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ 8 ಹೊಸ ತಾಲೂಕುಗಳಲ್ಲಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನವಾಗಿ ರಚಿಸಲಾಗಿರುವ 50 ತಾಲೂಕುಗಳ ಪೈಕಿ ಎಂಟು ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಅನುಮತಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ, ಕೊಪ್ಪಳದ ಕುಕನೂರು, ಕನಕಗಿರಿ, ರಾಯಚೂರಿನ ಸಿರಿವಾರ, ಉಡುಪಿಯ ಕಾಪು, ವಿಜಯಪುರದ ಬಬಲೇಶ್ವರ, ತಿಕೋಟಾ ಮತ್ತು ತಾಳಿಕೋಟೆ ತಾಲೂಕಿನಲ್ಲಿ ಹೊಸದಾಗಿ ಉಪನೋಂದಣಾಧಿಕಾರಿ ಕಚೇರಿ ಪ್ರಾರಂಭವಾಗಲಿದೆ. ಪ್ರತಿ ಕಚೇರಿಗೆ ತಲಾ ನಾಲ್ಕು ಹುದ್ದೆಗಳಂತೆ ಒಟ್ಟು 32 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಉಪ ನೋಂದಣಾಧಿಕಾರಿ 1, ಪ್ರಥಮ ದರ್ಜೆ ಸಹಾಯಕ 1, ಡಾಟಾ ಎಂಟ್ರಿ ಆಪರೇಟರ್ 1 ಮತ್ತು ಡಿ ಗ್ರೂಪ್ 1 ಹುದ್ದೆಗಳು ಇರಲಿವೆ..