ಖ್ಯಾತನಟ ಮಾಸ್ಟರ್ ಆನಂದ್ ಗೆ18.50 ಲಕ್ಷ ರೂಪಾಯಿ ವಂಚನೆ !

0

ಬೆಂಗಳೂರು : ನಿವೇಶನ ನೀಡುವುದಾಗಿ ಹಣ ಪಡೆದು ಚಿತ್ರನಟ ಮಾಸ್ಟರ್ ಆನಂದ್ ಗೆ ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯು ಆನಂದ್ ಅವರಿಗೆ 18.50 ಲಕ್ಷ ರೂಪಾಯಿ ವಂಚನೆ ಮಾಡಿದ್ದು, ಈ ಸಂಬಂಧ ನಟ ಆನಂದ್ ಅವರು ಬೆಂಗಳೂರಿನ ಚಂದ್ರಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ನಿವೇಶನ ನೀಡುವುದಾಗಿ ಕಂಪೆನಿಯು ಹೇಳಿತ್ತು. ಮನಿಕಾ ಕೆಂ.ಎಂ ಇಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ಅದು ಹೇಳಿತ್ತು. ಕಂಪನಿ ಮಾತು ಕೇಳಿಕೊಂಡು ಮಾಸ್ಟರ್ ಆನಂದ್ ಸೈಟ್ ಖರೀದಿಸಿದ್ದರು. ಆದರೆ, 2020 ರ ಸೆಪ್ಟಂಬರ್ ನಿಂದ 2021 ರ ಅಕ್ಟೋಬರ್ ನ ಅವಧಿಯಲ್ಲಿ ಕಂಪನಿ ತನ್ನನ್ನು ವಂಚಿಸಿದೆ ಎಂದು ಗೊತ್ತಾಗಿದೆ.

ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಕಂಪನಿ ಹೇಳಿದ್ದರಿಂದ ಮಾಸ್ಟರ್ ಆನಂದ್ ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ನಿವೇಶನವನ್ನು ಖರೀದಿಸಿದ್ದರು. ಮೊದಲು 70 ಲಕ್ಷ ರೂಪಾಯಿಗೆ ಸೈಟ್ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.5 ಲಕ್ಷ ರೂಪಾಯಿ ಮುಂಗಡ ಹಣ ಮಾಸ್ಟರ್ ಆನಂದ ಕಂಪನಿಗೆ ನೀಡಿದ್ದರು.

ಈ ನಡುವೆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿತ್ತು ಕಂಪನಿ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಿರಲಿಲ್ಲ ಎಂದು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed