ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ಬ್ಯಾನ್ ಮಾಡಿದೆ: ಪಿ ಚಿದಂಬರಂ

0

ವದೆಹಲಿ: 2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ.

ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ ಮತ್ತು ಆರ್‌ಬಿಐಗೆ 500 ರೂ ನೋಟನ್ನು ಮರು ಪರಿಚಯಿಸಲು ಒತ್ತಡ ಉಂಟಾಯಿತು ಮತ್ತು ಕೇಂದ್ರವು ಮತ್ತೆ 1,000 ರೂ. ನೋಟನ್ನು ಮರು ಪರಿಚಯಿಸಿದರೆ ಆಶ್ಚರ್ಯವಿಲ್ಲ ಎಂದು ಮಾಜಿ ಕೇಂದ್ರ ಹಣಕಾಸು ಸಚಿವರು ಹೇಳಿದರು.

ಅಚ್ಚರಿಯ ಕ್ರಮದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2,000 ರೂಪಾಯಿ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಸಾರ್ವಜನಿಕರು ಆ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ರವರೆಗೆ ಸಮಯವನ್ನು ನೀಡಿದೆ.

ಮೇ 23 ರಿಂದ ಸೆಪ್ಟೆಂಬರ್ 30ರ ವರೆಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.

About Author

Leave a Reply

Your email address will not be published. Required fields are marked *

You may have missed