ಸುಡಾನ್ ನಿಂದ ಬೆಂಗಳೂರಿಗೆ ಬರಲಿರುವ 229 ಭಾರತೀಯರು

0

ರಿಯಾದ್: ಆಪರೇಷನ್ ಕಾವೇರಿಯಡಿಯಲ್ಲಿ (Operation Kaveri) ಸುಡಾನ್‌ನಿಂದ (Sudan) ಭಾರತೀಯರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, 229 ಭಾರತೀಯರು ಭಾನುವಾರ ಜೆಡ್ಡಾದಿಂದ (Jeddah) ಬೆಂಗಳೂರಿಗೆ (Bengaluru) ತೆರಳುವ ವಿಮಾನದಲ್ಲಿ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry Of External Affairs) ತಿಳಿಸಿದೆ.

 

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ತಮ್ಮ ಟ್ವಿಟ್ಟರ್‌ (Twitter) ಖಾತೆಯಲ್ಲಿ ಟ್ವೀಟ್ (Tweet) ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಪರೇಷನ್ ಕಾವೇರಿ ನಾಗರಿಕರನ್ನು ಮರಳಿ ಮನೆಗೆ ಕರೆತರುತ್ತಿದೆ. 229 ಪ್ರಯಾಣಿಕರನ್ನು ಹೊತ್ತ 7ನೇ ವಿಮಾನವು ಇದಾಗಿದ್ದು, ಜೆಡ್ಡಾದಿಂದ ಬೆಂಗಳೂರಿಗೆ ತೆರಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸುಡಾನ್‌ನಲ್ಲಿ ಕದನ ವಿರಾಮವನ್ನು ಘೋಷಿಸಿರುವುದರಿಂದ, ಭಾರತ ಸೇರಿದಂತೆ ಹಲವಾರು ದೇಶಗಳು ತಮ್ಮ ನಾಗರಿಕರನ್ನು ಸಂಘರ್ಷ-ಪೀಡಿತ ರಾಷ್ಟ್ರದಿಂದ ಸ್ಥಳಾಂತಿರಸಲು ಪ್ರಯತ್ನಿಸುತ್ತಿವೆ. ಇದಕ್ಕೂ ಮೊದಲು, ಭಾರತೀಯ ನೌಕಾಪಡೆಯ ಹಡಗು, ಐಎನ್‌ಎಸ್ ಟೆಗ್ (INS Teg), ಶನಿವಾರ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ 288 ಭಾರತೀಯರನ್ನು ಆಪರೇಷನ್ ಕಾವೇರಿ ಮೂಲಕ ಯಶಸ್ವಿಯಾಗಿ ಸ್ಥಳಾಂತರಿಸಿತು. ಸುಡಾನ್ ಸಂಘರ್ಷಣೆಯಲ್ಲಿ ಸಿಲುಕಿಕೊಂಡಿದ್ದ 14ನೇ ತಂಡ ಇದಾಗಿದ್ದು, ಭಾರತಕ್ಕೆ ಮರಳಲು ಜೆಡ್ಡಾಕ್ಕೆ ತೆರಳಿದೆ.

About Author

Leave a Reply

Your email address will not be published. Required fields are marked *

You may have missed