ಡಿಕೆಶಿ ಸಿಎಂ ಮಾಡುವಂತೆ ಖರ್ಗೆಗೆ ಪತ್ರ ಬರೆದ ಆಪ್ತ

0

ರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಬಹುಮತದಿಂದ ಗೆದ್ದಿದೆ. ಸದ್ಯ ಕರ್ನಾಟಕ ಸಿಎಂ ಗಾದಿಗೇರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್​ಗೆ ಸಿಎಂ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿಕೆಶಿ ಆಪ್ತ ಜಿ.ಸಿ.ರಾಜು ಪತ್ರ ಬರೆದಿದ್ದಾರೆ.

ಇ-ಮೇಲ್ ಮೂಲಕ ಎಐಸಿಸಿ ಅಧ್ಯಕ್ಷ ಖರ್ಗೆಗೆ ಪತ್ರ ರವಾನಿಸಿದ್ದಾರೆ. ಬೆವರು ಸುರಿಸಿ ಪಕ್ಷವನ್ನು ಕಟ್ಟಿದವರಿಗೆ ಅವಕಾಶ ಮಾಡಿಕೊಡಬೇಕು. ಯಾವುದೇ ಕಷ್ಟಪಡದವರು ಪದೇಪದೆ ಅಧಿಕಾರ ಬೇಕೆಂದು ಹೇಳಿದರೆ ನಿಷ್ಠಾವಂತ ಕಾರ್ಯಕರ್ತರು ಯಾಕೆ ಕಷ್ಟ ಪಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಡಿ.ಕೆ.ಶಿವಕುಮಾರ್​ ಊಟ, ನಿದ್ದೆ ಬಿಟ್ಟು ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed