ಪೊಲೀಸರ ವಶಕ್ಕೆ ಪಡೆದ ವ್ಯಕ್ತಿ ಮಹಡಿ ಮೇಲಿಂದ ಬಿದ್ದು ಸಾವು..!

0

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿ 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂ ರಿನ ಬೊಮ್ಮನಹಳ್ಳಿಯ (Bommanahalli) ಬೇಗೂರು ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಮಹಡಿಯಿಂದ ಬಿದ್ದು ಮೃತಪಟ್ಟ ವ್ಯಕ್ತಿಯನ್ನು ಮೊಹಮ್ಮದ್​ ಹುಸೇನ್(31) ಎಂದು ಗುರುತಿಸಲಾಗಿದೆ.

ಈತನನ್ನು ಪ್ರಕರಣವೊಂದರ ಸಂಬಂಧ ವಶಕ್ಕೆ ಪಡೆಯಲು ಪೊಲೀಸರು (Bangalore Police) ತೆರಳಿದ್ದರು. 4ನೇ ಮಹಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದ ವೇಳೆ ಬೆತ್ತಲೆಯಾಗಿ ಬಿದ್ದು ಹುಸೇನ್ ಮೃತಪಟ್ಟಿದ್ದಾನೆ.

ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮೊಹಮ್ಮದ್​ ಹುಸೇನ್ ಕುಟುಂಬದವರು ಆರೋಪಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಹಮ್ಮದ್ ಹುಸೇನ್ ಪೊಲೀಸ್ ವಶದಲ್ಲೇ ಸಾವನ್ನಪ್ಪಿದ್ದಾನೆ ಎಂದು ಬೊಮ್ಮನಹಳ್ಳಿ ಪೊಲೀಸ್ ಸಿಬ್ಬಂದಿ ಮೇಲೆ ಆತನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಐಪಿಸಿ ಸೆಕ್ಷನ್ 302 ಅಡಿ ಕೊಲೆ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

About Author

Leave a Reply

Your email address will not be published. Required fields are marked *

You may have missed