ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ
ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು ಹಾರಾಟದ ವೇಳೆ ಉಂಟಾದ ತಾಂತ್ರಿಕ ದೋಷದಿಂದಾಗಿ ಜಿಲ್ಲೆಯ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಷಗೊಂಡಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದ ರೈತರ ಜಮೀನಿನಲ್ಲಿ ತರಬೇತಿ ವಿಮಾನ್ ಲ್ಯಾಂಡ್ ಆಗಿದೆ.
ಟ್ರೈನಿಂಗ್ ವಿಮಾನ ಹಾರಾಟ ಪ್ರಾರಂಭಿಸಿದ ನಂತರ ಅದರ ಎಂಜಿನ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣವೇ ಪೈಲಟ್ ವಿಮಾನವನ್ನು ರೈತರ ಜಮೀನಿನಲ್ಲಿ ಲ್ಯಾಂಡ್ ಮಾಡಿದ್ದಾರೆ.
ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿಮೀ ಹಾರಾಟದ ಬಳಿಕ ವಿಮಾನದಲ್ಲಿ ಸಮಸ್ಯೆ ಉಂಟಾಗಿದ್ದು ರೈತರ ಜಮೀನಿನಲ್ಲಿ ಲ್ಯಾಂಡ್ ಆಗಿದೆ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲಟ್ಗಳು ಅಪಾಯದಿಂದ ಪಾರಾಗಿದ್ದಾರೆ.