ಶಿವಲಿಂಗೇಗೌಡರಿಗೆ ನೀಡುವ ಒಂದೊಂದು ವೋಟು ನನಗೆ ಕೊಟ್ಟಂತೆ: ಸಿದ್ದರಾಮಯ್ಯ
ಹಾಸನ: ಶಿವಲಿಂಗೇಗೌಡ (Shivalinge Gowda) ಕಾಂಗ್ರೆಸ್ ಸೇರಿದರೆ ಅವರೇ ಅರಸೀಕೆರೆ ಕ್ಷೇತ್ರದ ಅಭ್ಯರ್ಥಿ, ಅವರಿಗೆ ನೀಡುವ ಒಂದೊಂದು ವೋಟು ಕೂಡ ನನಗೆ ಕೊಟ್ಟಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿವಲಿಂಗೇಗೌಡ ಬಗ್ಗೆ ಅಪಾರ ಕಾಳಜಿ ಹೊಂದಿದ್ದೇನೆ. ಅವರು ಬಡಕುಟುಂಬದಿಂದ ಬಂದು ಶಾಸಕರಾದವರು. ನೀವು ಅವರನ್ನು 3 ಸಾರಿ ಗೆಲ್ಸಿದ್ದೀರಾ, ಗೆಲ್ಲಿಸಿದ್ದು ಸಾರ್ಥಕ ಆಗಿದೆ. ವಿಧಾನಸಭಾ ಸದಸ್ಯರು ಆಗೋದು ಶೋಕಿ ಮಾಡಲು ಅಲ್ಲ. ಸದನದಲ್ಲಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಲು, ಜನರ ಪ್ರತಿನಿಧಿಯಾಗಿ ಜನರ ಸೇವೆ ಮಾಡಲು ಅಲ್ಲಿಗೆ ಹೋಗೋದು. ಇದನ್ನು ಶಿವಲಿಂಗೇಗೌಡ ಶಾಸಕರಾಗಿ ಸಮರ್ಥವಾಗಿ ಪ್ರತಿನಿಧಿಸಿದ್ದಾರೆ. ಸದನದಲ್ಲಿ ಯಾವುದೇ ವಿಚಾರ ಬಂದರೂ ಕೂಡ ಭಾಗಿಯಾಗಿ ಮಾತನಾಡುತ್ತಾರೆ ಎಂದು ಶಿವಲಿಂಗೇಗೌಡ ಅವರನ್ನು ಹೊಗಳಿದರು.