ಕಾರು ಹಾಗು ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

0

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇವತ್ತು ಆಕ್ಸಿಡೆಂಟ್ ಆಗಿದೆ. ಕಾರು ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗರ್ತಿಕೆರೆ ಗ್ರಾಮದ ಪೆಟ್ರೋಲ್​ ಬಂಕ್​ವೊಂದರ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.

ರಿಪ್ಪನ್​ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರು,

ರಸ್ತೆಗೆ ಅಡ್ಡವಾಗಿ ಬರುತ್ತಿದ್ದ ಬೈಕ್​ ತಪ್ಪಿಸಲು ಹೋಗಿ ಡಿಕ್ಕಿಯಾಗಿದೆ. ಬಳಿಕ ಕಾರು , ರಸ್ತೆ ಪಕ್ಕದ ಚರಂಡಿಗೆ ಉರುಳಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಸ್ಥಳಕ್ಕೆ ರಿಪ್ಪನ್​ಪೇಟೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗಾಯಗೊಂಡಿರುವ ಬೈಕ್​ ಸವಾರನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed