ಜಾನುವಾರುಗಳ ಸಂಖ್ಯಾನುಸಾರ ಸಿಬ್ಬಂದಿ ನೇಮಕಕ್ಕೆ ಕ್ರಮ – ಸಚಿವ ಕೆ. ವೆಂಕಟೇಶ್

0

ಬೆಂಗಳೂರು ;-;ನನ್ನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಎರಡು ತಿಂಗಳಲ್ಲಿ 200 ಪಶು ಪರೀಕ್ಷಕರನ್ನು ಹಾಗೂ ಡಿಸೆಂಬರ್ ಅಂತ್ಯದೊಳಗೆ 400 ಪಶು ವೈದ್ಯರನ್ನು ನೇಮಕ ಮಾಡಲಾಗುವುದು” ಎಂದು ತಿಳಿಸಿದರು.

“ಪಶು ಚಿಕಿತ್ಸಾಲಯಗಳಲ್ಲಿ ಹೆಚ್ಚುವರಿಯಾಗಿರುವ ಪಶುವೈದ್ಯರನ್ನು ಅಗತ್ಯವಿರುವ ಕಡೆ ವರ್ಗಾವಣೆ ಮಾಡಲಾಗುವುದು. ಸಿಬ್ಬಂದಿ ನೇಮಕ ಸಂಬಂಧ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ದೊರೆತ ಕೊಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದರು.

ಐದು ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರು ಇರಬೇಕೆಂಬ ನಿಯಮವಿದೆ. ಜಾನುವಾರುಗಳ ಸಂಖ್ಯಾನುಸಾರ ಸಿಬ್ಬಂದಿ ನೇಮಕಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು

About Author

Leave a Reply

Your email address will not be published. Required fields are marked *

You may have missed