ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮನೆಗೆ ನುಗ್ಗಿದ ಆರೋಪ: ಇನ್ಸ್ಪೆಕ್ಟರ್ ವಿರುದ್ದ ದೂರು

0

ಬೆಂಗಳೂರು : ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮೆನೆಗೆ ನುಗ್ಗಿದ ಆರೋಪದಡಿ ಇನ್ಸ್ಪೆಕ್ಟರ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಸುಬ್ರಮಣ್ಯ ನಗರ ಠಾಣೆ ಇನ್ಸ್ಪೆಕ್ಟರ್ (Subramanya Nagar Station Inspector) ಶರಣಗೌಡ ವಿರುದ್ದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ( Police Commissioner Pratap Reddy)ದೂರು ಕೊಡಲಾಗಿದೆ . ರಾಜಕುಮಾರ್ ಎಂಬುವರ ಬಂಧನಕ್ಕೆ ಪೊಲೀಸರು ತೆರಳಿದ್ದರು .

ಈ ವೇಳೆ ಮನೆಯಲ್ಲಿದ್ದ ಹೆಂಡತಿ ಹಾಗೂ ಮಗಳ ಜೊತೆ ಪೊಲೀಸರು ಅಸಭ್ಯ ವರ್ತನೆ ಮಾಡಿದ ಆರೋಪವಿದೆ. ಇದನ್ನ ಪ್ರಶ್ನೆ ಮಾಡಲು ರಾಜಕುಮಾರ್ ಇನ್ಸ್ಪೆಕ್ಟರ್ ಗೆ ಕರೆ ಮಾಡಿದ್ದ. ಈ ವೇಳೆ ರಾಜಕುಮಾರ್ ಗೆ ಯಾವುದರ ಬಗ್ಗೆ ಕಪ್ಲೆಂಟ್ ಆಗಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿಲ್ಲ. ಮಾತ್ರವಲ್ಲ ಯಾರಿಗೆ ಬೇಕಾದ್ರು ದೂರು ಕೊಡು ಎಂದು ಅವಾಜ್ ಹಾಕಿದ್ದ. ಇದೀಗ ಇನ್ಸ್ಪೆಕ್ಟರ್ ಶರಣಗೌಡ ಹಾಗೂ ರಾಜಕುಮಾರ್ ನಡುವಿನ ಸಂಭಾಷಣೆ ವೈರಲ್ ಆಗಿದೆ.

About Author

Leave a Reply

Your email address will not be published. Required fields are marked *

You may have missed