ವಿಧಾನಸೌಧ ಸುತ್ತಮುತ್ತ ಸೂಕ್ತ ಭದ್ರತೆ
ಬೆಂಗಳೂರು: ಬಜೆಟ್ ಮಂಡನೆ ವೇಳೆ ಅಪರಿಚಿತ ವಿಧಾನಸಭೆ ಪ್ರವೇಶಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭೆ ಪ್ರವೇಶದ ಸಂದರ್ಭದಲ್ಲಿ ಪಾಸ್ ತೋರಿಸಬೇಕ ವಿಧಾನಸೌಧ ಸುತ್ತಮುತ್ತ ಸೂಕ್ತ ಭದ್ರತೆ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು. ಈ ವೇಳೆ ಫೇಸ್ ಡಿಟೆಕ್ಟರ್ ವ್ಯವಸ್ಥೆ ಕಲ್ಪಿಸಲು ಬಸವರಾಜ ರಾಯರೆಡ್ಡಿ ಸಲಹೆ ನೀಡಿದರು. ಇದೇ ವೇಳೆ ಶಾಸಕರಿಗೆ ಐಡಿ ಕಾರ್ಡ್ ಸಿಕ್ಕಿಲ್ಲ ಎಂದು ಶಾಸಕ ಭರತ್ ಶೆಟ್ಟಿ ಸ್ಪೀಕರ್ ಗಮನಕ್ಕೆ ತಂದರು.