ಆಡುಗೋಡಿ ಇನ್ಸ್ ಪೆಕ್ಟರ್ ಮಂಜುನಾಥ್ ಸಮಯ ಪ್ರಜ್ಙೆಯಿಂದ ಉಳಿತು ಒಂದು ಜೀವ..!

0

ಬೆಂಗಳೂರು: ಹಣಕ್ಕಾಗಿ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರಿನ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed