ಕಾಂಗ್ರೆಸ್’ಗೆ ಮುನ್ನಡೆ: ಡಿಕೆಶಿ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು
ಬೆಂಗಳೂರು: ಅಧಿಕೃತ ಫಲಿತಾಂಶ ಘೋಷಣೆಯಾಗುವುದಕ್ಕೂ ಮುನ್ನ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಬಹುಮತದತ್ತ ಮುನ್ನುಗ್ಗುತ್ತಿದೆ. ಹೀಗಾಗಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಇನ್ನೂ ನಗರದ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದ್ದು,
ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಮತ ಎಣಿಕೆ ಕೇಂದ್ರಗಳ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರಸ್ತುತದ ಕಾಂಗ್ರೆಸ್ 123 ಸ್ಥಾನಗಳೊಂದಿಗೆ ಲೀಡಿಂಗ್ ಕಾಯ್ದುಕೊಂಡಿದ್ದರೇ, ಬಿಜೆಪಿ 71 ಜೆಡಿಎಸ್ 26 ಹಾಗೂ 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಮೂಲಕ ಬಹುತೇಕ ಕಾಂಗ್ರೆಸ್ ಗೆಲುವು ಖಚತವಾಗಿದೆ ಎಂದೇ ಹೇಳಬಹುದು. ಈಗ ಕಾಂಗ್ರೆಸ್ ನಾಯಕರು ತಮ್ಮ ಗೆದ್ದ ಶಾಸಕರ ಭದ್ರತೆಗೆ ಸಜ್ಜಾಗಿದ್ದಾರೆ.