ಶೇ.4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ : ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ

0

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2023ರಿಂದ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ನೌಕರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು, ದಿನಾಂಕ 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4ರಷ್ಟು ತುಟ್ಟುಭತ್ಯೆಯನ್ನು ಕೇಂದ್ರ ಸರ್ಕಾರಿ ನೌಕರರಿಗೆ ಮಾಡಲಾಗಿತ್ತು.

 

ರಾಜ್ಯ ಸರ್ಕಾರಿ ನೌಕರರಿಗೂ ಶೇ.4ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಲು ಸಂಘವು ಮನವಿ ಮಾಡಿತ್ತು. ಆ ಕಡತವನ್ನು ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಪ್ರಯುಕ್ತ ಬಾಕಿ ಇಡಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ನೀತಿ ಸಂಹಿತೆಯು ಅಂತ್ಯಗೊಂಡಿರುವುದರಿಂದ, ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-01-2023ರಿಂದ ಅನ್ವಯವಾಗುವಂತೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಿದ್ದಾರೆ.

About Author

Leave a Reply

Your email address will not be published. Required fields are marked *

You may have missed