ಪದೇ ಪದೆ ಪ್ರಧಾನಿ ಮೋದಿ, ಅಮಿತ್‌ ಶಾ ಬರ್ತಾರೆ, ಎಲ್ಲಾ ಕಡೆ ಸಿದ್ದರಾಮಯ್ಯರವರ ಓಡಾಟ : CM ಇಬ್ರಾಹಿಂ

0

ಕೋಲಾರ : ರಾಜ್ಯಕ್ಕೆ ಪದೇ ಪದೇ ಪ್ರಧಾನಿ ಮೋದಿ, ಅಮಿತ್‌ ಶಾ ಬರುತ್ತಿದ್ದಾರೆಂದರೆ, ರಾಜ್ಯಾದ್ಯಂತ ಮಾಜಿ ಸಿಎಂ ಸಿದ್ದರಾಮಯ್ಯ ಓಡಾಡುತ್ತಿದ್ದಾರೆಂದರೆ ಜೆಡಿಎಸ್‌ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿರುವುದೇ ಕಾರಣ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದರು.

 

ತಾಲೂಕಿನ ಅಮ್ಮನಲ್ಲೂರು ಗ್ರಾಪಂ ವ್ಯಾಪ್ತಿಯ ರಾಮಾಪುರ ಗ್ರಾಮದಲ್ಲಿ ಜೆಡಿಎಸ್‌ ಪಕ್ಷದ ಸಂಘಟನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ವಜ್ರದಂತಿರುವ ಮಾಜಿ ಪ್ರಧಾನಿ ದೇವೇಗೌಡ ಉತ್ತಮವಾಗಿ ಸಾಧನೆ ಮಾಡಿರುವುದರ ಜತೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ದಿನ ನಿತ್ಯವೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪಂಚರತ್ನ ಯೋಜನೆಯ ಮೂಲಕ ಓಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುತ್ತದೆ ಎನ್ನುವುಕ್ಕೆ ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವುದೇ ಸಾಕ್ಷಿ ಎಂದರು.

ಕೋಲಾರಶಾಸಕರಿಗೆಷರತ್ತು
ಕೋಲಾರ ಶಾಸಕ ಕೆ.ಶ್ರೀನಿವಾಸಗೌಡರಿಗೆ 1994ರಲ್ಲಿ ಟಿಕೆಟ್‌ ನೀಡಿ ಶಾಸಕರನ್ನಾಗಿ ಮಾಡಿದ್ದು ದೇವೇಗೌಡರು. ಅದನ್ನೆಲ್ಲಾ ಮರೆತು ಕಾಂಗ್ರೆಸ್‌ ಜತೆ ಸೇರಿ ನೀವು ಹಾಳಾಗುವುದಲ್ಲದೆ ನಿಮ್ಮ ಮಗನ ಭವಿಷ್ಯ ಹಾಳು ಮಾಡುತ್ತಿದ್ದೀರಿ. ಈ ಬಾರಿ ಕುಮಾರಸ್ವಾಮಿ ಅವರು ಸಿಎಂ ಆಗುವುದು ಶತಃಸಿದ್ಧ. ಒಂದು ವೇಳೆ ಸಿಎಂ ಆಗದಿದ್ದರೆ ನಾನೇ ನಿನಗೆ 25 ಕೋಟಿ ಕೊಡುತ್ತೇನೆ. ಆದರೆ ಬಿಜೆಪಿಯವರ ಬಳಿ ನೀವು ಪಡೆದಿರುವ 5 ಕೋಟಿ ಹಣವನ್ನು ನನಗೆ ತಂದು ಕೊಡಬೇಕು ಎಂದು ಷರತ್ತು ಹಾಕಿದರು.

About Author

Leave a Reply

Your email address will not be published. Required fields are marked *

You may have missed