ಸಿನಿಮಾ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಗಾಯ

0

ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಮತ್ತೆ ಪೆಟ್ಟು ಮಾಡಿಕೊಂಡಿದ್ದಾರೆ. `ಬಘೀರ’ ಚಿತ್ರದ ಶೂಟಿಂಗ್ ವೇಳೆ ಅವಗಢ ಸಂಭವಿಸಿದ್ದು, ಶ್ರೀಮುರಳಿಗೆ ತೀವ್ರ ಪೆಟ್ಟಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

`ಮದಗಜ’ ಸಿನಿಮಾದ ಬಳಿಕ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ ಬ್ಯುಸಿಯಾಗಿದ್ದರು. ರಾಕ್‌ಲೈನ್ ಸ್ಟುಡಿಯೋದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯಗಳಾಗಿದೆ. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿದೆ.

ಈ ಹಿಂದೆ ಮಹೇಶ್ ಕುಮಾರ್ ನಿರ್ದೇಶನದ ಮದಗಜ ಶೂಟಿಂಗ್ ವೇಳೆ ಹೀಗೆ ಆಗಿತ್ತು. ಶ್ರೀಮುರಳಿ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಈಗ ಮತ್ತೆ ಅದೇ ಕಾಲಿಗೆ ಪೆಟ್ಟಾಗಿದೆ. ಹಾಗಾಗಿ ನಟ ಈ ಸಂಬಂಧ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.

About Author

Leave a Reply

Your email address will not be published. Required fields are marked *

You may have missed