ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಈಗಾಗಲೇ ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ಬಳಿಕ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೆ ರಾಜ್ಯ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 250 ದೈಹಿಕ ಶಿಕ್ಷಕರು ಸೇರಿದಂತೆ 2,500 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಫೆಬ್ರವರಿಯಲ್ಲಿ ರಾಜ್ಯದ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 250 ದೈಹಿಕ ಶಿಕ್ಷಕರು ಸೇರಿದಂತೆ 2,500 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು. ಈ ಮೂಲಕ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.