ಬಿಜೆಪಿ ದಲಿತರನ್ನ ನಿರ್ಲಕ್ಷ್ಯ ಮಾಡಿಕೊಂಡು ಬಂದಿದ್ದಾರೆ: ಡಾ. ಜಿ. ಪರಮೇಶ್ವರ್
ಬೆಂಗಳೂರು: ಬಿಜೆಪಿ ದಲಿತರನ್ನ ನಿರ್ಲಕ್ಷ್ಯ ಮಾಡಿಕೊಂಡು ಬಂದಿದ್ದಾರೆ ಎಂದು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಂತ್ಯದ ಮೋಸದ ಪಾರ್ಟಿ.
ಬೊಮ್ಮಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡ್ತೀವಿ ಅಂತ ಹೇಳಿದ್ರು. ಆದರೆ ಲೋಕಸಭೆಯಲ್ಲಿ ಕೇಳಿದ ಪ್ರಶ್ಮೆಗೆ ಕೇಂದ್ರ ಸಚಿವರು,
ಆ ರೀತಿಯ ಪ್ರಸ್ತಾವನೆ ಇಲ್ಲ ಎಂದು ಉತ್ತರಿಸಿದ್ದಾರೆ. ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎನ್ನುವವರು ಕೇಂದ್ರಕ್ಕೆ ಪ್ರಸ್ತಾವನೆಯನ್ನೇ ಕಳಿಸಿಲ್ಲ. ದಲಿತ ಸಮುದಾಯಕ್ಕೆ ಎಷ್ಟು ಮೋಸ ಮಾಡ್ತಿದೆ ನೋಡಿ. ಇದರ ವಿರುದ್ಧ ದಲಿತ ಸಮುದಾಯ ಧ್ವನಿ ಎತ್ತಬೇಕು. ರಾಜ್ಯದ್ಯಾಂತ ಪ್ರತಿಭಟನೆ ನಡೆಸಬೇಕು. ಯಾವ ರೀತಿ ಪ್ರತಿಭಟನೆ ನಡೆಸಬೇಕು ಎಂದು ತೀರ್ಮಾನ ಮಾಡುತ್ತೇವೆ. ಬಿಜೆಪಿ ದಲಿತರನ್ನ ನಿರ್ಲಕ್ಷ್ಯ ಮಾಡಿಕೊಂಡು ಬಂದಿದ್ದಾರೆ. ಎಂದು ಹೇಳಿದ್ದಾರೆ.