BJPಯವರು 15 ಲಕ್ಷ ಅಕೌಂಟ್’ಗೆ ಹಾಕ್ತೀವಿ ಅಂದ್ರಲ್ಲಾ?, ಹಾಕಿದ್ರಾ?: ಡಿಕೆಶಿ ತಿರುಗೇಟು

0

ಬೆಂಗಳೂರು: ಬಿಜೆಪಿ (BJP) ಯವರು 15 ಲಕ್ಷ ಅಕೌಂಟ್‌ಗೆ ಹಾಕ್ತೀವಿ ಅಂದ್ರಲ್ಲಾ?, ಹಾಕಿದ್ರಾ? ಒಂದು ಲಕ್ಷ ರೂಪಾಯಿ ಸಾಲ ಮನ್ನಾ ಮಾಡ್ತೀವಿ ಅಂದ್ರು, ಏನಾಯ್ತು? ಮೊದಲು ಅವರು ನೀಡಿದ್ದ ಭರವಸೆಗಳ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ನಾಯಕರ ಟೀಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಿಂದ ಟೀಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಮಗು ಹುಟ್ಟಿ 15 ದಿನ ಆಗಿದೆ, ಬಟ್ಟೆ ಹೊಲಿಸಬೇಕು, ಅಳತೆ ಕೊಡಬೇಕು ಎಂದು ಟಾಂಗ್​ ನೀಡಿದ್ದಾರೆ. ಜೂನ್ 1ರಂದು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. 5 ಗ್ಯಾರಂಟಿಗಳ ಜಾರಿ ಬಗ್ಗೆ ಗೈಡ್‌ಲೈನ್ಸ್‌ ಬರಲಿದೆ. ಸ್ಟ್ರೈಕ್ ಮಾಡೋರಿಗೆ ಬೇಡ ಅನ್ನಲ್ಲ, ಮಾಡಲಿ ಎಂದರು.

About Author

Leave a Reply

Your email address will not be published. Required fields are marked *

You may have missed