ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ಬ್ರೇಕ್: ಬಾಲಕಿ ರಕ್ಷಣೆ

0

ಬಾಲ್ಯ ವಿವಾಹದ ಬಗ್ಗೆ ಸೂಕ್ತ ಅರಿವಿಲ್ಲದೆ ಅಪ್ರಾಪ್ತೆಯನ್ನು ಮದುವೆ ಮಾಡಿ ಕೊಡುತ್ತಿದ್ದ ಕುಟುಂಬಕ್ಕೆ ಅಧಿಕಾರಿಗಳು ತಿಳಿ ಹೇಳಿ ಮದುವೆ ನಿಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದಲ್ಲಿ ಇಂದು ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದ ಕುಟುಂಬವೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳನ್ನು ಇಂದು ಮದುವೆ ನಿಶ್ಚಿಯಿಸಿ ವಿವಾಹ ಮಾಡಿಕೊಡಲು ಕುಟುಂಬಸ್ಥರು ನಿರ್ಧರಿಸಿದ್ದರು.

ಈ ಬಗ್ಗೆ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಲಕಿಯ ಮನೆಗೆ ಧಾವಿಸಿ ಮದುವೆಯನ್ನು ತಡೆದು ಕುಟುಂಬಸ್ಥರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು, ಬಾಲ್ಯ ವಿವಾಹ ಕೈಗೊಂಡಲ್ಲಿ ಆಗಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಅದಲ್ಲದೆ ಮುಂದಿನ ದಿನಗಳಲ್ಲಿ ಸಹ ಬಾಲ್ಯ ವಿವಾಹ ಮಾಡಿದಂತೆ ಅಥವಾ ಬಾಲ್ಯ ವಿವಾಹ ಕೈಗೊಂಡರೇ ಕನಿಷ್ಠ ಒಂದು ವರ್ಷದವರೆಗೆ ಜೈಲು ಹಾಗೂ 1 ರಿಂದ 2 ಲಕ್ಷ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ಸಹ ನೀಡಿದ್ದಾರೆ. ಸದ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿಗಳು, ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ ಹುಬ್ಬಳ್ಳಿಯ ಘಂಟಿಕೇರಿ ಬಾಲಕಿಯರ ಬಾಲ ಮಂದಿರದಲ್ಲಿ ದಾಖಲಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed