ಮುತ್ತಪ್ಪ ರೈ ಪುತ್ರನ ಮೇಲೆ ಉದ್ಯಮಿ ಶ್ರೀನಿವಾಸ್ ನಾಯ್ಡು ಹಲ್ಲೆ..! ದೂರು ದಾಖಲು

0

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Rikki Rai) ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು(Srinivas Naidu)ವಿರುದ್ದ ದೂರು ದಾಖಲಾಗಿದೆ.

ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ಅವರು ದೂರು ನೀಡಿದ್ದಾರೆ. ನಿನ್ನೆ(ಮೇ.26) ರಾತ್ರಿ ಊಟಕ್ಕೆಂದು ರಿಕ್ಕಿ ರೈ ಲ್ಯಾವೆಲ್ಲಿ ರಸ್ತೆಯ ಖಾಜಿ ಬಾರ್ ಅಂಡ್ ಕಿಚನ್ ಹೋಟೆಲ್​ಗೆ ಹೋಗಿದ್ದರು.

ಈ ವೇಳೆ ಶ್ರೀನಿವಾಸ್​ ನಾಯ್ಡು ಮೂರು ನಾಲ್ಕು ಜನರೊಂದಿಗೆ ಬಂದು, ಏಕಾಏಕಿ ಅಟ್ಯಾಕ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ರಿಕ್ಕಿ ರೈ ಹಣೆಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿಲಾಯ್ತು. ಪೊಲೀಸರು ಬಂದಿದ್ದೇ ಶ್ರೀನಿವಾಸ ನಾಯ್ಡು ಅವರ ಜೊತೆ ಇದ್ದವರು ಎಸ್ಕೇಪ್ ಆಗಿದ್ದಾರೆ ಎಂದು ದೂರು ನೀಡಿದ್ದಾರೆ. ಇನ್ನು ಸೋಮಶೇಖರ್ ದೂರಿನನ್ವಯ ಎಫ್ ಐ ಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed