ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

0

ಬೆಂಗಳೂರು: ಶೀಘ್ರದಲ್ಲೇ ಹೊಸ ಸಿಎಂ ಘೋಷಣೆ ಮಾಡುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ(Randeep Singh Surjewala) ಹೇಳಿದರು. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ. ಅವರು ಈ ಮಣ್ಣಿನ ಮಗ. ನಮ್ಮ ಹಿರಿಯ ನಾಯಕರು.

ಈ ವಿಚಾರದಲ್ಲಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆ ನನಗಿದೆ” ಎಂದರು. ಇದೇ ವೇಳೆ, “ಮೊದಲ ಸಚಿವ ಸಂಪುಟ ಸಭೆಯಲ್ಲೇ ನಮ್ಮ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲಿದ್ದೇವೆ” ಎಂದು ತಿಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಶೀಘ್ರದಲ್ಲೇ ಕರ್ನಾಟಕದ ನೂತನ ಮುಖ್ಯಮಂತ್ರಿಯ ಹೆಸರು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed