ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನಿರಾಕರಣೆ: : ಕಾಂಗ್ರೆಸ್ ಪ್ರತಿಭಟನೆ

0

ಬೆಂಗಳೂರು: ಬಡವರ ಅನ್ನ ಭಾಗ್ಯ ಯೋಜನೆಗೆ ಮಣ್ಣು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಇಬ್ಬಗೆ ನೀತಿಯನ್ನು ಖಂಡಿಸಿ ಅಡುಗೆ ಮಾಡುವ ಮೂಲಕ ಕಾಂಗ್ರೆಸ್ ವಿನೂತನವಾಗಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದೆದುರು ಪ್ರತಿಭಟನೆ ನಡೆಯುತ್ತಿದೆ

ಮೋದಿ ಭಕ್ತರು ಅನ್ನ ಬೇಯಿಸುತ್ತಿರುವಂತೆ ಅಣಕು ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರು ರೋಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ .

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡಲು ಉದ್ದೇಶಿಸಿರುವ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೆ ಅಕ್ಕಿ ನೀಡದೆ ರಾಜ್ಯ ಸರ್ಕಾರದ ಮನವಿಯನ್ನ ತಿರಸ್ಕರಿಸಿರುವುದು ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಯನ್ನು ಎತ್ತಿ ತೋರುತ್ತಿದೆ.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಪರ ಇದೆ ಎಂಬುದು ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರು ಬಡವರ ಬಗ್ಗೆ ಕಾಳಜಿ ವಹಿಸದೆ ಬಡವರ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ವಿತರಿಸದೆ ರಾಜ್ಯ ಸರ್ಕಾರದ ಮನವಿಯನ್ನ ತಿರಸ್ಕರಿಸಿದೆ.

ಕೇಂದ್ರ ಸರ್ಕಾರಕ್ಕೆ ಹಣ ನೀಡಿ ಬೇಡಿಕೆ ಇಟ್ಟರು ಪ್ರಧಾನಿ ನರೇಂದ್ರ ಮೋದಿ ಬೇಡಿಕೆಯನ್ನು ಗಮನಿಸದೆ ಇರುವುದು ಬಡವರ ವಿರೋಧಿ ನೀತಿಯನ್ನ ಎತ್ತಿ ತೋರುತ್ತದೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವುದು ಸಾಬೀತಾಗಿದೆ. ಕರ್ನಾಟಕ ರಾಜ್ಯದ ಬಿಜೆಪಿ ಸಂಸತ್ ಸದಸ್ಯರು ನಿಷ್ಕ್ರಿಯರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಬಡವರಿಗೆ ಅಕ್ಕಿ ನೀಡದೆ ಹೋದರೆ ಹೋರಾಟ ನಡೆಸುತ್ತಿವೆ ಎಂಬುವ ಬಿಜೆಪಿ ನಾಯಕರ ಹೇಳಿಕೆಯನ್ನು ಗಮನಿಸಿದರೆಬಡವರಿಗೆ ಅಕ್ಕಿ ನೀಡದೆ ವಂಚಿಸುತ್ತಿರುವ ಮೋದಿ ಸರ್ಕಾರ ಎಂಬುವ ಅರಿವು ಸಹ ಇಲ್ಲದೆ ಇರುವುದು ಅವರಿಗೆ ರಾಜಕೀಯ ಪ್ರಜ್ಞೆ ಇಲ್ಲ ಎಂಬುದು ಸಹ ಸಾಬೀತಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನ ಹಂತ ಹಂತವಾಗಿ ಜಾರಿಗೆ ತರುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೇಡಿನ ರಾಜಕೀಯ ನಡೆಸಲು ಬಿಜೆಪಿ ಕೇಂದ್ರ ಸರ್ಕಾರ ಹುನ್ನಾರ ನಡೆಸಿ ಇಬ್ಬಗೆ ನೀತಿಯನ್ನು ಅನುಸರಿಸಿ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದೆ.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್ , ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜಿ.ಜನಾರ್ದನ್, ಎ.ಆನಂದ್ ಈ. ಶೇಖರ್, ಸುಧಾಕರ್ ಮಂಜುನಾಥ್,ಹೇಮರಾಜ್,ಅನಿಲ್, ಚಂದ್ರಶೇಖರ, ಹೋಬಳೇಶ್ ,ಉಮೇಶ್ ಪ್ರಶಾಂತ್, ಪುಟ್ಟರಾಜು, ಸುಪ್ರಜ್,ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

You may have missed