ಶಾಸಕ ಸತೀಶ್ ರೆಡ್ಡಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ಪ್ರಚಾರ

0

ಬೆಂಗಳೂರು: ಬೆಂಗಳೂರಿನ ಹೈವೋಲ್ಟೇಜ್ ಕ್ಷೇತ್ರ ಬೊಮ್ಮನಹಳ್ಳಿಯಲ್ಲಿ ನಟ ದರ್ಶನ್(actor darshan) ಭರ್ಜರಿ ಪ್ರಚಾರ ನಡೆಸಿ, ಶಾಸಕ ಸತೀಶ್ ರೆಡ್ಡಿ(MLA Satish Reddy) ಪರವಾಗಿ ಮತಯಾಚನೆ ಮಾಡಿದ್ದಾರೆ. ಬೊಮ್ಮನಹಳ್ಳಿ ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗಿ ನಿಂತಿದೆ.

ಕಳೆದ 3 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತತ ಗೆಲುವು ಕಾಣುತ್ತಾ ಶಾಸಕರಾಗಿರುವ ಸತೀಶ್ ರೆಡ್ಡಿ 4ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಹೀಗಾಗಿ ಈ ಚುನಾವಣೆ ಸಾಕಷ್ಟು ಗಮನ ಸೆಳೆದಿದ್ದು, ನಟ ದರ್ಶನ್(actor darshan) ಕೂಡ ಸತೀಶ್ ರೆಡ್ಡಿ ಪರ ಬೊಮ್ಮನಹಳ್ಳಿಯ ಗಾರ್ಮೆಂಟ್ಸ್ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಮತಯಾಚನೆ ಮಾಡಿದರು. ಇನ್ನು ದರ್ಶನ್ ಎಂಟ್ರಿ ಹಿನ್ನೆಲೆಯಲ್ಲಿ ಭಾರಿ ಜನಸಂಖ್ಯೆ ಬೊಮ್ಮನಹಳ್ಳಿಯಲ್ಲಿ ನೆರೆದಿತ್ತು. ಬೊಮ್ಮನಹಳ್ಳಿ-ಬೇಗೂರು ರಸ್ತೆಯಲ್ಲಿ ನಟ ದರ್ಶನ್ ಫ್ಯಾನ್ಸ್ ಭಾರಿ ಸಂಖ್ಯೆಯಲ್ಲಿ ಸೇರಿ ನೆಚ್ಚಿನ ನಟನನ್ನ ಬರಮಾಡಿಕೊಂಡರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಸಾಕಷ್ಟು ವಿಶಾಲವಾಗಿದೆ. ಹೀಗಾಗಿ ಬಹುತೇಕ ಕಡೆ ರೋಡ್ ಶೋ ಮೂಲಕವೇ ನಟ ದರ್ಶನ್ ಶಾಸಕ ಸತೀಶ್ ರೆಡ್ಡಿ ಪರ ಪ್ರಚಾರ ನಡೆಸಿದರು. ಅರಕರೆ, ಬಿಳೆಕಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೈಕ್ ರ‍್ಯಾಲಿ ನಡೆಯಿತು. ಮತ್ತೊಂದ್ಕಡೆ ಬೊಮ್ಮನಹಳ್ಳಿಯ ಬಿಳೆಕಹಳ್ಳಿಯಿಂದ ಶುರುವಾದ ಬೈಕ್ ರ‍್ಯಾಲಿ ಪುಟ್ಟೇನಹಳ್ಳಿ ಸತ್ಯ ಗಣಪತಿಯ ದೇವಾಲಯದ ತನಕ ನಡೆಯಿತು. ನಂತರ ಸತ್ಯ ಗಣಪತಿ ದೇವಾಲಯ ಬಳಿ ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸಿ ಕ್ಯಾಂಪೇನ್ ನಡೆಸಲಾಯಿತು.

About Author

Leave a Reply

Your email address will not be published. Required fields are marked *

You may have missed