ಮುಸ್ಲಿಂ ಬಾಂಧವರಿಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತ್ಯಾಗ – ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ ಕೇಳಿದ್ದೆ. ನಿವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಅಶಿರ್ವಾದದಿಂದ ಸಿಎಂ ಆಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಇದರಲ್ಲಿ ಯಾವುದೇ ಮುಲಾಜಿಲ್ಲದೇ ಕೆಲಸ ನಿಬಾಯಿಸುತ್ತೇನೆ ಎಂದರು.